ಬೆಳ್ತಂಗಡಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : ಜೇಸಿಐ ಮಡಂತ್ಯಾರು ವತಿಯಿಂದ ನೀಡಲ್ಪಡುವ ಉದ್ಯಮ ರತ್ನ ಪ್ರಶಸ್ತಿಗೆ ಅವಿನಾಶ್ ಕುಲಾಲ್ ಮಾಣೂರು ಆಯ್ಕೆಯಾಗಿದ್ದಾರೆ.
ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಸಣ್ಣ ವಯಸ್ಸಿನಲ್ಲೇ ಕುಲಾಲ ಯುವವೇದಿಕೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ನಮನ ಗ್ರೂಪ್ ಆಫ್ ಇಂಡಸ್ಟ್ರಿಸ್ ಎಂಬ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿರುವ ಇವರು ಕಂಬಳ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ.

