ಪೆರ್ಡೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : ದೂಪದಕಟ್ಟೆ ಬೈರಂಪಳ್ಳಿಯ ನಿವಾಸಿ, ಭಾರತೀಯ ಸೇನೆಯ ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ ತರಬೇತಿ ಕೇಂದ್ರದಲ್ಲಿ ಸುದೀರ್ಘ ವರ್ಷದ ಸೇವೆ ಮಾಡಿ ನಿವೃತ್ತಿ ಹೊಂದಿದ ಯೋಧ ರಮೇಶ್ ಕುಲಾಲರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮವು ಶ್ರೀ ವಾಸುಕಿ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ, ದೂಪದ ಕಟ್ಟೆ ಪೆರ್ಡೂರು ಮುಂದಾಳತ್ವದಲ್ಲಿ ಗ್ರಾಮಸ್ಥರ ಉಪಸ್ಥಿತಿಯಲ್ಲಿ, ರಮೇಶ್ ಕುಲಾಲರ ಅಭಿಮಾನಿ ಬಳಗದಿಂದ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದು ಪೆರ್ಡೂರು ದೂಪದ ಕಟ್ಟೆ ಬೈರಂಪಳ್ಳಿಯಲ್ಲಿ ಗುರುವಾರ ಜರಗಿತು.
ಈ ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರ ದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್ ಮಲ್ಯ, ಉಪಾಧ್ಯಕ್ಷ ಅಮ್ಮಣ್ಣಿ ಶೆಟ್ಟಿ, ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಪೆರ್ಜೆ, ಭೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿಯಾನಂದ ಹೆಗ್ಡೆ, ಕುಂಬಾರರ ಗುಡಿ ಕೈಗಾರಿಕಾ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೂಪದಕಟ್ಟೆಯ ಮುಖ್ಯೋಪಾಧ್ಯಾಯ ಗೋಪಾಲ ನಾಯ್ಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಪೆರ್ಡೂರು ಕುಲಾಲ ಸಂಘದ ಅಧ್ಯಕ್ಷ ಕಾಳು ಕುಲಾಲ್, ನಾನಿಲ್ತಾರು ಕುಲಾಲ ಸಂಘದ ಅಧ್ಯಕ್ಷ ಜಯರಾಮ ಕುಲಾಲ್ ಅಗ್ಗರಟ್ಟ, ದೀಪಕ್ ಬೆಳ್ಮಣ್, ರಾಮ ಕುಲಾಲ್ ಪಕ್ಕಾಲು, ಗಣೇಶ್ ಕುಲಾಲ್ ಪಕ್ಕಾಲು, ಕೃಷ್ಣ ಕುಲಾಲ್ ಪೆರ್ಡೂರು, ರೇಷ್ಮಾ ಶೆಟ್ಟಿ ಇನ್ನ, ಗೋವಿಂದ ಕುಲಾಲ್ ದೂಪದಕಟ್ಟೆ, ಸುರೇಶ್ ಡಿ ಕುಲಾಲ್, ಸುಕೇಶ್ ಶೆಟ್ಟಿ, ನಾಗೇಶ್ ಕುಲಾಲ್ ಸೇರಿದಂತೆ ರಮೇಶ್ ಕುಲಾಲ್ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು. ಸಂಘಟಕ ಸುಭಾಸ್ ಶೆಟ್ಟಿ ಎಲ್ಲರನ್ನು ಸ್ವಾಗತಿಸಿ, ಸುಧಾಕರ್ ಕುಲಾಲ್ ಪಟ್ಲ ವಂದಿಸಿದರು.
ವರದಿ : ಉದಯ ಕುಲಾಲ್ ಕಳತ್ತೂರು






